ಜನವರಿ 5 ರಂದು ಅಂದ್ರೆ ನಿನ್ನೆ ಪಂಜಾಬ್ನಲ್ಲಿ ಸಂಭವಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭದ್ರತಾ ಲೋಪದ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ಪ್ರಧಾನಿ ಮೋದಿಗೆ ಕರೆ ಮಾಡಿ ರಾಷ್ಟ್ರಪತಿ ಭವನಕ್ಕೆ ಕರೆಸಿಕೊಂಡಿದ್ದ ಕೋವಿಂದ್, ನೇರವಾಗಿ ಪ್ರಧಾನಿಗಳಿಂದಲೇ ಭದ್ರತಾ ಲೋಪದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ನಂತರ ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರೋ ರಾಷ್ಟ್ರಪತಿ ಕಛೇರಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ರು. ನಿನ್ನೆ ಪಂಜಾಬ್ನಲ್ಲಿ ಉಂಟಾದ ಭದ್ರತಾ ಲೋಪ ಕುರಿತು, ನೇರವಾಗಿ ಅವರಿಂದಲೇ ಮಾಹಿತಿ ಪಡೆದುಕೊಂಡರು. ಜೊತೆಗೆ, ಗಂಭೀರ ಲೋಪದ ಬಗ್ಗೆ ಕೂಡ ರಾಷ್ಟ್ರಪತಿಗಳು ಕಾಳಜಿ ಮತ್ತು ಆತಂಕ ವ್ಯಕ್ತಪಡಿಸಿದ್ರು ಎಂದು ತಿಳಿಸಿದೆ.
President Ram Nath Kovind met Prime Minister Narendra Modi at the Rashtrapati Bhavan today and received from him a first-hand account of the security breach in his convoy in Punjab yesterday. The President expressed his concerns about the serious lapse. pic.twitter.com/lzvAuriuGb
— President of India (@rashtrapatibhvn) January 6, 2022
Discussion about this post